ಬೆಳಗಾವಿ: ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಐದನೇ ದಿನದ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು.
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳು ಹಾಗೂ ವಿವಿಧ ಜನಪರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹಮ್ಮಿಕೊಂಡಿರುವ ಈ ಪಾದಯಾತ್ರೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡ್ರ ಹಾಗೂ ಅರವಿಂದ ಪಾಟೀಲ ಸೇರಿದಂತೆ ಪಕ್ಷದ ಹಲವು ಪ್ರಮುಖ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದರು.
ಮುಖಂಡರಾದ ವಿಜಯ ಮೆಟಗುಡ್ಡ, ಮಲ್ಲಣ್ಣ ಯಾದವಾಡ, ಜಗದೀಶ್ ಬೂದಿಹಾಳ, ಸಚಿನ್ ಕಡಿ, ವೀರಪಾಕ್ಷಿ ಮಾಮನಿ, ಸಿ.ಬಿ. ಪಾಟೀಲ, ಬಸವರಾಜ ಸೋಮಗೊಂಡ, ಮಹಾದೇವ ಶೆಕ್ಕಿ, ಭೀಮಶಿ ಭರಮಣ್ಣವರ, ಕೆ.ವಿ. ಪಾಟೀಲ, ಮಂಜುನಾಥ ಪಮ್ಮಾರ, ಪಿ.ಎಫ್. ಪಾಟೀಲ, ಈರಣ್ಣ ಚಂದರಗಿ, ಚೇತನ್ ಅಂಗಡಿ, ಪ್ರಫುಲ್ ಪಾಟೀಲ, ಪ್ರಮೋದ ನುಗ್ಗಾನಟ್ಟಿ, ಸಂತೋಷ ಹಡಪದ ಹಾಗೂ ನಾಗಪ್ಪ ಸಂಗೋಳ್ಳಿ ಸೇರಿದಂತೆ ಹಲವು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬಳ್ಳಾರಿ ಚಲೋ ಪಾದಯಾತ್ರೆಯ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪಕ್ಷದ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬೆಳಗಾವಿ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿರುವುದು ಪಕ್ಷದ ಸಂಘಟನಾ ಬಲವನ್ನು ಪ್ರದರ್ಶಿಸಿದೆ.









