ಬೆಳಗಾವಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಿ ರೈತರ ಬೆಳೆ ಹಾನಿಗೆ
ಸೂಕ್ತ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಆಗ್ರಹಿಸಿ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ನೇತೃತ್ವದಲ್ಲಿ ಮಾಜಿ ಶಾಸಕರು,ಮುಖಂಡರ ನಿಯೋಗ ಜಂಟಿ ಕೃಷಿ ನಿರ್ದೇಶಕರಾದ ಹೆಚ್.ಡಿ.ಕೊಳೇಕರ ಅವರನ್ನು ಭೇಟಿ ಮಾಡಿದರು
ಸಕಾಲಕ್ಕೆ ಬೀಜ ಮತ್ತು ಗೊಬ್ಬರವನ್ನು ವಿತರಣೆ ಮಾಡಬೇಕು.
ಕಳಪೆ ಬೀಜ ಮತ್ತು ಗೊಬ್ಬರ ವಿರತಣೆಯಾಗದಂತೆ ನೋಡಿಕೊಳ್ಳಬೇಕು.
ಸಕಾಲಕ್ಕೆ ಮಳೆ ಆಗದೇ ಇರುವ ಕಾರಣ, ಹಾನಿಗೊಳಗಾದ ಬೆಳೆ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ನೀಡಬೇಕು ಹಾಗೂ
ಬೆಳೆದ ಬೆಳೆಗಳಿಗೆ ಸರ್ಕಾರದಿಂದ ಸೂಕ್ತ ದರ ನಿಗದಿ ಪಡಿಸಬೇಕು ಎಂದು ಅವರು ಒತ್ತಾಯಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡ್ರ,ಅರವಿಂದ ಪಾಟೀಲ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ,ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಕೋಶಾಧ್ಯಕ್ಷ ಸಂತೋಷ ದೇಶನೂರ,ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ್ ಮೋಹಿತೆ, ಮುಖಂಡರಾದ ನಿಂಗಪ್ಪ ಚೌಡನ್ನವರ, ಸುಭಾಷ್ ತುರಮರಿ,ಮನೋಜ ಪಾಟೀಲ, ಶ್ರೀಕರ ಕುಲಕರ್ಣಿ,ಸಂತೋಷ ಹಡಪದ, ವಿಶಾಲ ಬೋಗುರ, ಸಿದ್ದು ಬೋಳಣ್ಣವರ, ಬಸವರಾಜ ದೊಡಮನಿ,ಬಸವರಾಜ ನೇಸರಗಿ, ಮಂಜುನಾಥ ಅಷ್ಟಗಿ ಹಾಗೂ ಇತರರಿದ್ದರು









